4:24 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ

21/10/2021, 16:02

ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ

ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಕತ್ಲೂರು ಗ್ರಾಮ ವಿಠಲ ಮಲೆಕುಡಿಯ ಅವರನ್ನು ನಕ್ಸಲರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2012 ಮಾರ್ಚ್ ತಿಂಗಳಲ್ಲಿ ಬಂಧಿಸಲಾಗಿತ್ತು. ವಿಠಲ ಜತೆ ಅವರ ತಂದೆ ಅವರನ್ನು ಕೂಡ ದಸ್ತಗಿರಿ ಮಾಡಲಾಗಿತ್ತು. ಸುಮಾರು 4 ತಿಂಗಳು ಸೆರೆಮನೆ ವಾಸ ಅನುಭವಿಸಿದ ಜನರ್ಲಿಸಂ ವಿದ್ಯಾರ್ಥಿಯಾದ ವಿಠಲ ಮಲೆಕುಡಿಯ ಅವರು ನಂತರ ಜಾಮೀನು ಮೇಲೆ ಬಿಡುಗಡೆಗೊಂಡಿದ್ದರು. ಅಂದಿನ ಸರಕಾರ ವಿಠಲ ಮಲೆಕುಡಿಯ ಅವರ ಮೇಲೆ ಸಾಕಷ್ಟು ಸಾಕ್ಷ್ಮಾಧಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡುವುದಾಗಿ ಹೇಳಿತ್ತು. ಈ ನಡುವೆ ಬೆಳ್ತಂಗಡಿ ಪೊಲೀಸರು ವಿಠಲ ಮಲೆಕುಡಿಯ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. 2012ರಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

ವಿಠಲ ಮಲೆಕುಡಿಯ ಅವರ ಕತ್ಲೂರು ಮನೆಯಲ್ಲಿ ದೊರಕಿದ 21 ಸಾವಿರ ರೂ. ನಗದನ್ನು ನಕ್ಸಲ್ ಚಟುವಟಿಕೆಗಾಗಿ ಗ್ರಾಮಸ್ಥರಿಂದ ಸಂಗ್ರಹಿಸಿದ ಹಣ ಎಂದು ಪೊಲೀಸರು ಆರೋಪಿಸಿದ್ದರು. ಆದರೆ

ವಿಠಲ ಮಲೆಕುಡಿಯ ಅವರು ಇದು ತನ್ನ ತಂದೆ – ತಾಯಿ ದುಡಿದ ಹಣ. ಅಪ್ಪ ಅಮ್ಮನಿಗೆ ಬ್ಯಾಂಕ್ ಖಾತೆ ಇಲ್ಲದಿರುವುದರಿಂದ ಮನೆಯಲ್ಲೇ ಉಳಿತಾಯ ಮಾಡಿ ಕೂಡಿಟ್ಟ ಹಣ ಎಂದು ಸ್ಪಷ್ಟನೆ ನೀಡಿದ್ದರು. ನಂತರ ವಿಠಲ ಅವರು ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು. ನಾರಾವಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್ ನಿಂದ ಸ್ಪರ್ಧಿಸಿದ್ದರು.

ಇದೀಗ ಪ್ರಕರಣ ವಿಚಾರಣೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೂರ್ಣಗೊಂಡಿದ್ದು, ಇಂದು ತೀರ್ಪು ಹೊರಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು