1:44 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ

21/10/2021, 16:02

ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ

ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಕತ್ಲೂರು ಗ್ರಾಮ ವಿಠಲ ಮಲೆಕುಡಿಯ ಅವರನ್ನು ನಕ್ಸಲರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2012 ಮಾರ್ಚ್ ತಿಂಗಳಲ್ಲಿ ಬಂಧಿಸಲಾಗಿತ್ತು. ವಿಠಲ ಜತೆ ಅವರ ತಂದೆ ಅವರನ್ನು ಕೂಡ ದಸ್ತಗಿರಿ ಮಾಡಲಾಗಿತ್ತು. ಸುಮಾರು 4 ತಿಂಗಳು ಸೆರೆಮನೆ ವಾಸ ಅನುಭವಿಸಿದ ಜನರ್ಲಿಸಂ ವಿದ್ಯಾರ್ಥಿಯಾದ ವಿಠಲ ಮಲೆಕುಡಿಯ ಅವರು ನಂತರ ಜಾಮೀನು ಮೇಲೆ ಬಿಡುಗಡೆಗೊಂಡಿದ್ದರು. ಅಂದಿನ ಸರಕಾರ ವಿಠಲ ಮಲೆಕುಡಿಯ ಅವರ ಮೇಲೆ ಸಾಕಷ್ಟು ಸಾಕ್ಷ್ಮಾಧಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡುವುದಾಗಿ ಹೇಳಿತ್ತು. ಈ ನಡುವೆ ಬೆಳ್ತಂಗಡಿ ಪೊಲೀಸರು ವಿಠಲ ಮಲೆಕುಡಿಯ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. 2012ರಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

ವಿಠಲ ಮಲೆಕುಡಿಯ ಅವರ ಕತ್ಲೂರು ಮನೆಯಲ್ಲಿ ದೊರಕಿದ 21 ಸಾವಿರ ರೂ. ನಗದನ್ನು ನಕ್ಸಲ್ ಚಟುವಟಿಕೆಗಾಗಿ ಗ್ರಾಮಸ್ಥರಿಂದ ಸಂಗ್ರಹಿಸಿದ ಹಣ ಎಂದು ಪೊಲೀಸರು ಆರೋಪಿಸಿದ್ದರು. ಆದರೆ

ವಿಠಲ ಮಲೆಕುಡಿಯ ಅವರು ಇದು ತನ್ನ ತಂದೆ – ತಾಯಿ ದುಡಿದ ಹಣ. ಅಪ್ಪ ಅಮ್ಮನಿಗೆ ಬ್ಯಾಂಕ್ ಖಾತೆ ಇಲ್ಲದಿರುವುದರಿಂದ ಮನೆಯಲ್ಲೇ ಉಳಿತಾಯ ಮಾಡಿ ಕೂಡಿಟ್ಟ ಹಣ ಎಂದು ಸ್ಪಷ್ಟನೆ ನೀಡಿದ್ದರು. ನಂತರ ವಿಠಲ ಅವರು ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು. ನಾರಾವಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್ ನಿಂದ ಸ್ಪರ್ಧಿಸಿದ್ದರು.

ಇದೀಗ ಪ್ರಕರಣ ವಿಚಾರಣೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೂರ್ಣಗೊಂಡಿದ್ದು, ಇಂದು ತೀರ್ಪು ಹೊರಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು