4:49 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ನಕ್ಸಲ್ ಜತೆ ಸಂಬಂಧ ಆರೋಪ: ವಿಠಲ ಮಲೆಕುಡಿಯ ನಿರ್ದೋಷಿ; ನ್ಯಾಯಾಲಯ ತೀರ್ಪು: 9 ವರ್ಷಗಳ ಸುದೀರ್ಘ ಕಾನೂನು ಹೋರಾಟ

21/10/2021, 16:02

ಮಂಗಳೂರು(reporterkarnataka.com): ನಕ್ಸಲ್ ಜತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಸುಮಾರು 4 ತಿಂಗಳು ಬಂಧನದಲ್ಲಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡಿರುವ

ವಿಠಲ ಮಲೆಕುಡಿಯ ಅವರನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ. 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಗುರುವಾರ ಈ ಕುರಿತು ತೀರ್ಪು ನೀಡಿದೆ.

ಬೆಳ್ತಂಗಡಿ ತಾಲೂಕಿನ ಕತ್ಲೂರು ಗ್ರಾಮ ವಿಠಲ ಮಲೆಕುಡಿಯ ಅವರನ್ನು ನಕ್ಸಲರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2012 ಮಾರ್ಚ್ ತಿಂಗಳಲ್ಲಿ ಬಂಧಿಸಲಾಗಿತ್ತು. ವಿಠಲ ಜತೆ ಅವರ ತಂದೆ ಅವರನ್ನು ಕೂಡ ದಸ್ತಗಿರಿ ಮಾಡಲಾಗಿತ್ತು. ಸುಮಾರು 4 ತಿಂಗಳು ಸೆರೆಮನೆ ವಾಸ ಅನುಭವಿಸಿದ ಜನರ್ಲಿಸಂ ವಿದ್ಯಾರ್ಥಿಯಾದ ವಿಠಲ ಮಲೆಕುಡಿಯ ಅವರು ನಂತರ ಜಾಮೀನು ಮೇಲೆ ಬಿಡುಗಡೆಗೊಂಡಿದ್ದರು. ಅಂದಿನ ಸರಕಾರ ವಿಠಲ ಮಲೆಕುಡಿಯ ಅವರ ಮೇಲೆ ಸಾಕಷ್ಟು ಸಾಕ್ಷ್ಮಾಧಾರ ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡುವುದಾಗಿ ಹೇಳಿತ್ತು. ಈ ನಡುವೆ ಬೆಳ್ತಂಗಡಿ ಪೊಲೀಸರು ವಿಠಲ ಮಲೆಕುಡಿಯ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು. 2012ರಿಂದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

ವಿಠಲ ಮಲೆಕುಡಿಯ ಅವರ ಕತ್ಲೂರು ಮನೆಯಲ್ಲಿ ದೊರಕಿದ 21 ಸಾವಿರ ರೂ. ನಗದನ್ನು ನಕ್ಸಲ್ ಚಟುವಟಿಕೆಗಾಗಿ ಗ್ರಾಮಸ್ಥರಿಂದ ಸಂಗ್ರಹಿಸಿದ ಹಣ ಎಂದು ಪೊಲೀಸರು ಆರೋಪಿಸಿದ್ದರು. ಆದರೆ

ವಿಠಲ ಮಲೆಕುಡಿಯ ಅವರು ಇದು ತನ್ನ ತಂದೆ – ತಾಯಿ ದುಡಿದ ಹಣ. ಅಪ್ಪ ಅಮ್ಮನಿಗೆ ಬ್ಯಾಂಕ್ ಖಾತೆ ಇಲ್ಲದಿರುವುದರಿಂದ ಮನೆಯಲ್ಲೇ ಉಳಿತಾಯ ಮಾಡಿ ಕೂಡಿಟ್ಟ ಹಣ ಎಂದು ಸ್ಪಷ್ಟನೆ ನೀಡಿದ್ದರು. ನಂತರ ವಿಠಲ ಅವರು ಗ್ರಾಮ ಪಂಚಾಯಿತಿ ಚುನಾವಣೆಗೂ ಸ್ಪರ್ಧಿಸಿದ್ದರು. ನಾರಾವಿ ಗ್ರಾಮ ಪಂಚಾಯಿತಿಯ 2ನೇ ವಾರ್ಡ್ ನಿಂದ ಸ್ಪರ್ಧಿಸಿದ್ದರು.

ಇದೀಗ ಪ್ರಕರಣ ವಿಚಾರಣೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಪೂರ್ಣಗೊಂಡಿದ್ದು, ಇಂದು ತೀರ್ಪು ಹೊರಬಿದ್ದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು