2:30 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಎನ್ ಡಿಎ ಮೈತ್ರಿಕೂಟ ಜೆಡಿಎಸ್ ಸೇರೊಲ್ಲ: ದೇವೇಗೌಡರಿಗೆ ಶಾಕಿಂಗ್ ಮೆಸೇಜ್ ಕೊಟ್ಟ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ

16/10/2023, 18:16

ಬೆಂಗಳೂರು(reporterkarnataka.com): ಜಾತ್ಯತೀತ ಜನತಾ ದಳ ಎನ್ ಡಿಎ ಜತೆ ಯಾವುದೇ ಮೈತ್ರಿ ಮಾಡದಿರಲು ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ನಮ್ಮ ನಿರ್ಧಾರವನ್ನು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ತಿಳಿಸಲಾಗುವುದು ಎಂದರು.
ನಿಮ್ಮ ನಿರ್ಧಾರವನ್ನು ದೇವೇಗೌಡರು ಒಪ್ಪದಿದ್ದರೆ ಪಕ್ಷ ಬಿಟ್ಟು ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇದು ನಮ್ಮ ಮನೆ. ನಮ್ಮ ಮನೆಗೆ ಬೇರೆಯವರು ಬಂದರೆ ನಾವ್ಯಾಕೆ ಮನೆ ಬಿಟ್ಟು ಹೋಗಬೇಕು. ಪಕ್ಷದ ಎಲ್ಲ ಜಿಲ್ಲಾಧ್ಯಕ್ಷರು ಎನ್ ಡಿಎ ಜತೆ ಹೋಗದಿರಲು ಸಲಹೆ ಮಾಡಿದ್ದಾರೆ. ಈ ನಿರ್ಧಾರವನ್ನು ಪಕ್ಷದ ವರಿಷ್ಠರಿಗೆ ತಿಳಿಸಲಾಗುವುದು ಎಂದು ಇಬ್ರಾಹಿಂ ನುಡಿದರು.
ದೇವೇಗೌಡ, ಕುಮಾರಸ್ವಾಮಿ ಅವರು ಎನ್ ಡಿಎ ಜತೆ ಹೋದರೆ ನಿಮ್ಮ ಅಧ್ಯಕ್ಷ ಅಧಿಕಾರವನ್ನು ಉಪಯೋಗಿಸಿ ಅವರನ್ನು ಪಕ್ಷದಿಂದ ಉಚ್ಚಾಟಿಸುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಸಿ.ಎಂ. ಇಬ್ರಾಹಿಂ, ಅಧ್ಯಕ್ಷೀಯ ಅಧಿಕಾರ ಬಳಸಿಕೊಂಡೇ ಪಕ್ಷದ ಸಭೆ ಕರೆದು ಈ ನಿರ್ಧಾರಕ್ಕೆ ಬಂದಿದ್ದೇವೆ. ಉಚ್ಚಾಟನೆಯ ಬಗ್ಗೆ ಈಗ ಏನೂ ಹೇಳಲಾರೆ. ಕೋರ್ ಕಮಿಟಿ ರಚಿಸಿ ಪಕ್ಷದ ನಿರ್ಧಾರವನ್ನು ವರಿಷ್ಠರಿಗೆ ಮುಟ್ಟಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು