8:05 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಎನ್ ಡಿಎ ತೆಕ್ಕೆಗೆ ದೇವೇಗೌಡರ ಜೆಡಿಎಸ್ ಸೇರ್ಪಡೆ: ಲೋಕಸಭೆ ಚುನಾವಣೆಗೆ ಜಂಟೀ ಸ್ಪರ್ಧೆ

23/09/2023, 12:48

ಹೊಸದಿಲ್ಲಿ(reporterkarnataka.com): ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್ ಡಿಎ ಮೈತ್ರಿಕೂಟಕಕ್ಕೆ ಜಾತ್ಯತೀತ ಜನತಾ ದಳ ಸೇರ್ಪಡೆಗೊಂಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಜಂಟೀಯಾಗಿ ಸ್ಪರ್ಧಿಸಲಿದೆ.
ಬಿಜೆಪಿ ಜತೆಗೆ ಸಖ್ಯ ನಡೆಸುವ ಕುರಿತು ದೆಹಲಿಗೆ ತೆರಳಿದ್ದ ಜನತಾ ದಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.
ದೆಹಲಿಯಲ್ಲಿರುವ ಗೃಹ ಸಚಿವರ ನಿವಾಸದಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಜನತಾ ದಳ ಹಿರಿಯ ಮುಖಂಡರು ಕುಪೇಂದ್ರ ರೆಡ್ಡಿ ಅವರು, ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು