1:59 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಭರ್ತಿಗೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

12/03/2025, 23:54

ಬೆಂಗಳೂರು(reporterkarnataka.com): ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಖಾಲಿ ಇರುವ 247 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕುಣಿಗಲ್ ಕ್ಷೇತ್ರದ ಸದಸ್ಯ ಡಾ. ಹೆಚ್.ಡಿ.ರಂಗನಾಥ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು 247 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಈಗಾಗಲೇ 14-03-2024ರಂದು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕರ್ನಾಟಕ ಲೋಕ ಸೇವಾ ಆಯೋಗದಿಂದ 15-3-2024ರಂದು ಅಧಿಸೂಚನೆ ಪ್ರಕಟಿಸಲಾಗಿದೆ.
ದಿನಾಂಕ: 16-11-2024 ಮತ್ತು 17-01-2024ರಂದು ಕಲ್ಯಾಣ ಕರ್ನಾಟಕ ವೃಂದದ 97 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಉಳಿಕೆ ಮೂಲ ವೃಂದದ 150 ಹುದ್ದೆಗಳಿಗೆ ದಿನಾಂಕ: 07-12-2024 ಮತ್ತು 08-12-2024ರಂದು ಪರೀಕ್ಷೆ ನಡೆಸಲಾಗಿರುತ್ತದೆ.
ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಿದ್ದು ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು