8:20 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು