5:59 PM Tuesday9 - June 2026
ಬ್ರೇಕಿಂಗ್ ನ್ಯೂಸ್
ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು