8:02 PM Tuesday30 - June 2026
ಬ್ರೇಕಿಂಗ್ ನ್ಯೂಸ್
Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;…

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು