1:21 PM Wednesday4 - February 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು