9:15 PM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು