1:09 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು ಹಣತೆ

01/12/2024, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶ್ರೀ ರಾಮೇಶ್ವರ ಕ್ಷೇತ್ರ ನಿಡುವಾಳೆಯಲ್ಲಿ ಕಾರ್ತಿಕ ದೀಪೋತ್ಸವ ಜರುಗಿತು.
ವಿದ್ಯುದ್ದೀಪ, ತಳಿರು ತೋರಣಗಳಿಂದ ಕಂಗೊಳಿಸುತ್ತಿದ್ದ ಶ್ರೀ ರಾಮೇಶ್ವರ ದೇವಸ್ಥಾನ ಕ್ಷೇತ್ರದ ಆಡಳಿತ ದಾರರಾದ ಶ್ರೀ ಸುನೀಲ್ ಜೆ. ಗೌಡ ದಂಪತಿ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ದೀಪೋಜ್ವಲನ ಮಾಡುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹಣತೆಗಳು ಪ್ರಜ್ವಲಿಸಿದವು. ಸುಡುಮದ್ದು ಪ್ರದರ್ಶನ ಕಾರ್ಯಕ್ರಮಕ್ಕೆ ಮೆರುಗನ್ನು ಹೆಚ್ಚಿಸಿತು.
ದೀಪೋತ್ಸವದ ನಂತರ ಸಾರ್ವಜನಿಕ ಅನ್ನಸಂತರ್ಪಣ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಶ್ವೇತಾ ಸುನೀಲ್ ಜೆ. ಗೌಡ, ಸಿದ್ದಾಂತ್ ಗೌಡ, ಲಕ್ಷ್ಮೀ ಲಕ್ಷ್ಮಣ ಗೌಡ್ರು , ಗೀತಾ ಗೌಡ್ರು ರೂಪ ಗೌಡ್ರು , ಮಾಜಿ ಅರ್ಚಕರಾದ ರಾಮ್ ಭಟ್ ವಾಟೇಖಾನ್, ಮಧುಕರ ಗೋಖಲೆ, ಮಲ್ಲಿಗೆ ಎಸ್ಟೇಟ್ ವ್ಯವಸ್ಥಾಪಕರಾದ ಎನ್. ಆರ್. ನಾಗರಾಜ್ ಭಟ್, ಕ್ಷೇತ್ರದ ಅರ್ಚಕರಾದ ಚರಣ್ ಕಾರಂತ್ , ದಿನಕರ ಭಟ್, ಸಿಬ್ಬಂದಿ ಸೂರ್ಯನಾರಾಯಣ ಗ್ರಾಮಸ್ಥರಾದ ಶಿವಪ್ಪ ಉರುವಿನಖಾನ್, ವಿಶ್ವ ಆಟೋ , ಸುಬ್ರಾಯ ಗೌಡ್ರು ,ಹೆಚ್. ಆರ್. ಚಂದ್ರಶೇಖರ್ , ರವಿ ಬಿ. ಉರುವಿನ ಖಾನ್, ಜಯಂತ್ ಪೂಜಾರಿ , ಚಂದ್ರಶೇಖರ್ , ಮುರಳಿ ಜಾವಳಿ, ಶೇಖರ್ ಮಾವಿನಕಟ್ಟೆ, ನಾಗೇಶ್ ಸಪಾಲ್ಯ, ಸುರೇಶ್, ಸುಮಿತ್ರಾ ಜಗನ್ನಾಥ್ , ಶಂಕರ್ ಹಾಗೂ ನಿಡುವಾಳೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು