3:02 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನೇರ ನಡೆ ನುಡಿಯ, ಸದಾ ಸತ್ಯ ಹೇಳುವ ವಸಂತ ಬಂಗೇರ ಮತ್ತು ನಾನು ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು: ಸಿದ್ದರಾಮಯ್ಯ

21/05/2024, 20:35

ಬೆಳ್ತಂಗಡಿ(reporterkarnataka.com): ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.
ಮಾಜಿ ಮುಖ್ಯ ಸಚೇತಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.
ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದು ಮುಖ್ಯಮಂತ್ರಿ ನುಡಿದರು.
ಬಂಗೇರ ಅವರು ತಮ್ಮ ಬದುಕಿನುದ್ದಕ್ಕೂ ವಿಶ್ವ ಮಾನವ ಮೌಲ್ಯವನ್ನು ಪಾಲಿಸಿದರು. ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು ಎಂದು ಬಣ್ಣಿಸಿದರು.
2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದು ವಿವರಿಸಿದರು.
ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ ರಾಜಕಾರಣ ಅತ್ಯಂತ ಬಡವಾಗಿದೆ. ಇವರ ಆರೋಗ್ಯ ಚೇತರಿಸಿಕೊಳ್ಳುತ್ತದೆ ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
*ಬಸ್ ಸ್ಟಾಂಡ್ ಗೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ*
ಬೆಳ್ತಂಗಡಿ ಬಸ್ಟಾಂಡ್ ಗೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ಸ್ಥಾಪಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.
ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು