3:57 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನೀರಾವರಿಗೆ ಹೆಚ್ಚಿನ ಪ್ರಾಮುಖ್ಯತೆ: ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ

23/01/2025, 22:03

*1274 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ: ಸಿ.ಎಂ ಸಿದ್ದರಾಮಯ್ಯ*

*ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಗೋವಿಂದ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು: ಸಿ.ಎಂ*

ಹಿರಿಯೂರು(reporterkarnataka.com): ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಾಣಿವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ ಬಳಿಕ ವಂಚಿಸಿದರು. ಈ ಯೋಜನೆಗೆ 5300 ಕೋಟಿ ರೂಪಾಯಿ ಕೊಡುವುದಾಗಿ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಆದರೆ ನಯಾಪೈಸೆ ಬಿಡುಗಡೆಗೊಳಿಸದೆ ಈ ಭಾಗದ ಜನ ಸಮುದಾಯಕ್ಕೆ ಗೋವಿಂದ ಕಾರಜೋಳ ಮತ್ತು ಕೇಂದ್ರ ಸರ್ಕಾರ ವಂಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನಾದರೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿ ಕೊಟ್ಟ ಮಾತಿನಂತೆ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿ ಎಂದು ಸವಾಲು ಹಾಕಿದರು.
ಬಿಜೆಪಿ ಕೊಟ್ಟ ಮಾತಿಗೆ ವಂಚಿಸುತ್ತದೆ. ನಾವು ಕೊಟ್ಟ ಮಾತು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ.
ಚುನಾವಣೆ ವೇಳೆ ಕೊಟ್ಟ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಸೇರಿ ಎಲ್ಲಾ ಜನ ಸಮುದಾಯಗಳ ನಂಬಿಕೆ ಉಳಿಸಿಕೊಂಡಿದ್ದೇವೆ. ಇದೇ ನಮಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದರು.‌
ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿದ್ದು ಸರ್ಕಾರದಿಂದ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ್ದೇವೆ. 115 ವರ್ಷಗಳ ಇತಿಹಾಸ ಇರುವ, ರಾಜ್ಯದಲ್ಲಿ ನಿರ್ಮಾಣ ಆದ ಮೊದಲ ಜಲಾಶಯ ಇದಾಗಿದ್ದು ಮೂರನೇ ಬಾರಿ ಕೋಡಿ ಬಿದ್ದಿದೆ.
ಅಂದಿನ‌ ಮಹಾರಾಣಿ ಅಮ್ಮಣ್ಣಿ ತಾಯಿ ತಮ್ಮ ಒಡವೆಗಳನ್ನು ಮಾರಿ 45 ಲಕ್ಷ ರೂಪಾಯಿ ಖರ್ಚು ಮಾಡಿ ಈ ಜಲಾಶಯ ನಿರ್ಮಿಸಿದ್ದಾರೆ. ಇದು 30 ಸಾವಿರ ಎಕರೆ ಕೃಷಿ ಭೂಮಿಗೆ ನೀರು ಒದಗಿಸುತ್ತಿದೆ. ಹೀಗಾಗಿ ರಾಣಿ ಅಮ್ಮಣ್ಣಿಯವರನ್ನು ನಾವು ಸ್ಮರಿಸುತ್ತೇವೆ, ಧನ್ಯವಾದ ಅರ್ಪಿಸುತ್ತೇವೆ ಎಂದರು.
ಜಲ ಸಂಪನ್ಮೂಲ ಸಚಿವರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೇರಿ ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು