2:15 PM Monday16 - February 2026
ಬ್ರೇಕಿಂಗ್ ನ್ಯೂಸ್
ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ…

ಇತ್ತೀಚಿನ ಸುದ್ದಿ

ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ ನಾಯಕ

18/11/2024, 20:32

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಆಲಮಟ್ಟಿಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾ.23ರ ವರೆಗೂ ನೀರು ಹರಿಸುವ ನಿರ್ಣಯ ಕೈಗೊಂಡಿದ್ದು, ಇದರಿಂದ ರೈತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ನರಸಿಂಹನಾಯಕ (ರಾಜೂ ಗೌಡ) ಹೇಳಿದರು.
ತಾಲೂಕಿನ ಕೊಡೇಕಲ್ ಗ್ರಾಮದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಈ ಬಾರಿ ಆಲ ಮಟ್ಟಿ-ನಾರಾಯಣಪುರ ಜಲಾಶಯದಲ್ಲಿ ಒಟ್ಟು 124 ಟಿಎಂಸಿ ನೀರು ಇದ್ದರೂ10 ದಿನ ಬಂದ್‌ನಿರ್ಧಾರ ಅವೈಜ್ಞಾನಿಕವಾಗಿದೆ. ನಮ್ಮ ಭಾಗದ ಶಾಸಕರು ಹಾಗೂ ಸಚಿವರು ರೈತರ ಬಗ್ಗೆ ಸಭೆಯಲ್ಲಿ ಧ್ವನಿ ಎತ್ತದೆ ಇರುವುದೇ ರೈತರಿಗೆ ದೊಡ್ಡ ಸಮಸ್ಯೆ ಎಂದರು.

ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಸಲಹಾ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗುತ್ತಿದೆ. ಹೀಗಾಗಿ ಹೆಚ್ಚಿನ ನೀರಾವರಿ ಪ್ರದೇಶ ರಾಯಚೂರು- ಯಾದಗಿರಿ- ಕಲಬುರಗಿ ಭಾಗದಲ್ಲಿ ಹೊಂದಲಾಗಿದೆ. ಆ ಭಾಗದ ಸಚಿವರು ಕಬ್ಬು ಬೆಳೆಯುವ ರೈತರ ಹಿತ ಕಾಪಾಡಲು ಜಲಾಶಯದಲ್ಲಿ ಟಿಎಂಸಿ ನೀರು ಹಿಡಿದಿಟ್ಟುಕೊಂಡಿದ್ದಾರೆ. ಆದರೆ, ನಮ್ಮ ಭಾಗದ ರೈತರ ಹಿತದೃಷ್ಟಿಯಿಂದ ಸಭೆಗೆ ಹಾಜರಾಗಿ ಒಕ್ಕೂರಲಿನಿಂದ ನೀರು ಬಿಡಿಸುವ ಪ್ರಯತ್ನ ಜನಪ್ರತಿನಿಧಿಗಳು ಮಾಡುತ್ತಿಲ್ಲ. ನೀರು ನಿರ್ವಹಣೆ ಮಾಹಿತಿ ಕೊರತೆ ಇದೆ. ರೈತರೊಬ್ಬರನ್ನು ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿಲ್ಲ, ಇದು ದುರ್ದೈವ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ವಿಷಯದ ಬಗ್ಗೆ ಪ್ರಸ್ತಾಪಿಸಿದ ಅವರು, ರೈತರಿಗೆ ಸಮರ್ಪಕ ನೀರು ಬಿಡದೆ ಮೋಸ ಮಾಡಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದರು. ಏಪ್ರಿಲ್ 20ರವರೆಗೂ ವಾರಾಬಂದಿ ಅನುಸರಿಸದೆ, ಕಾಲುವೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು