11:00 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

09/07/2021, 16:33

ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಭೇದವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಜನಸೇವೆಯನ್ನು ಮಾಡುತ್ತಿವೆ. 

 ಜನಸೇವೆ ಮಾಡಲು ಅಧಿಕಾರವಿರಬೇಕೆಂದಿಲ್ಲ. ಮಾನವೀಯ ಗುಣ ಮುಖ್ಯವಾಗುತ್ತದೆ. ಈ ಭಾಗದ ಪುಟ್ಟ ಬಾಲಕಿ ಕ್ಲಾವಿಯ ಅಗ್ನೇಲ್ ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದು ಅವಳ ಹೆತ್ತವರ ಆಸೆಯಂತೆ ಇಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ನೀರುಮಾರ್ಗದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಜನರಿಗೆ ನೆರವು ನೀಡುವ ಉದ್ದೇಶದಿಂದ ತಿಂಗಳ ಹಿಂದೆ ಆಂಬುಲೆನ್ಸ್ ಸೇವೆ ಪ್ರಾರಂಭ ಮಾಡಿದ್ದೆವು. ಬಡವರ್ಗದ ಜನರು ತುರ್ತು ಸಂದರ್ಭದಲ್ಲಿ ಸಮಸ್ಯೆ ಎದುರಿಸಬಾರದು ಎಂಬ ದೃಷ್ಟಿಯಿಂದ ಈ ಸೇವೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಅಧಿಕಾರ ಇದ್ದಾಗ ಮಾತ್ರ ಜನರ ಜೊತೆಯಿದ್ದರೆ ಸಾಲದು. ಅಧಿಕಾರವಿಲ್ಲದಿದ್ದರೂ ಜನರ ಜೊತೆ ನಿಲ್ಲಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ರಾಜಕಾರಣ ಮಾಡದೇ ಅನೇಕ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ 20 ಕಡೆಗಳಲ್ಲಿ ರಕ್ತದಾನ ಮಾಡಿ 2500 ಯುನಿಟ್ ರಕ್ತ ಸಂಗ್ರಹ ಮಾಡಿದ್ದಲ್ಲದೆ ಆಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಜನರಿಗೆ ನೆರವಾಗಿದೆ. ತುರ್ತು ಸೇವೆಗೆ ಆಂಬುಲೆನ್ಸ್ ಗೆ ಕೈಜೋಡಿಸಿದ ಎಲ್ಲರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗುರುಪುರ ವಲಯ ಅಧ್ಯಕ್ಷ ಸುರೇಂದ್ರ ಕಾಂಬ್ಳಿ ಧರ್ಮ ಗುರು ಫಾ. ಜೋಸೆಫ್ ಮಸ್ಕರೇನಸ್, ಧರ್ಮಗುರು‌ ಜಿ ಐ ಎಸ್ ಇಸ್ಮಾಯಿಲ್, ಸಮಾಜ ಸೇವಕ ಎಮ್ ಪ್ರೇಮಚಂದ್ರ ಭಟ್, ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ, ನೀರುಮಾರ್ಗ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ‌ ಯಶೋಧ ಜೆ ಸಾಲ್ಯಾ‌ನ್ ಉಪಸ್ಥಿತರಿದ್ದರು.

ಶ್ರೀಧರ್ ಸ್ವಾಗತಿಸಿದರು. ಸಂತೋಷ್ ಡಿ ಪಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು