3:46 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

09/07/2021, 16:33

ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಭೇದವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಜನಸೇವೆಯನ್ನು ಮಾಡುತ್ತಿವೆ. 

 ಜನಸೇವೆ ಮಾಡಲು ಅಧಿಕಾರವಿರಬೇಕೆಂದಿಲ್ಲ. ಮಾನವೀಯ ಗುಣ ಮುಖ್ಯವಾಗುತ್ತದೆ. ಈ ಭಾಗದ ಪುಟ್ಟ ಬಾಲಕಿ ಕ್ಲಾವಿಯ ಅಗ್ನೇಲ್ ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದು ಅವಳ ಹೆತ್ತವರ ಆಸೆಯಂತೆ ಇಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ನೀರುಮಾರ್ಗದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಜನರಿಗೆ ನೆರವು ನೀಡುವ ಉದ್ದೇಶದಿಂದ ತಿಂಗಳ ಹಿಂದೆ ಆಂಬುಲೆನ್ಸ್ ಸೇವೆ ಪ್ರಾರಂಭ ಮಾಡಿದ್ದೆವು. ಬಡವರ್ಗದ ಜನರು ತುರ್ತು ಸಂದರ್ಭದಲ್ಲಿ ಸಮಸ್ಯೆ ಎದುರಿಸಬಾರದು ಎಂಬ ದೃಷ್ಟಿಯಿಂದ ಈ ಸೇವೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಅಧಿಕಾರ ಇದ್ದಾಗ ಮಾತ್ರ ಜನರ ಜೊತೆಯಿದ್ದರೆ ಸಾಲದು. ಅಧಿಕಾರವಿಲ್ಲದಿದ್ದರೂ ಜನರ ಜೊತೆ ನಿಲ್ಲಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ರಾಜಕಾರಣ ಮಾಡದೇ ಅನೇಕ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ 20 ಕಡೆಗಳಲ್ಲಿ ರಕ್ತದಾನ ಮಾಡಿ 2500 ಯುನಿಟ್ ರಕ್ತ ಸಂಗ್ರಹ ಮಾಡಿದ್ದಲ್ಲದೆ ಆಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಜನರಿಗೆ ನೆರವಾಗಿದೆ. ತುರ್ತು ಸೇವೆಗೆ ಆಂಬುಲೆನ್ಸ್ ಗೆ ಕೈಜೋಡಿಸಿದ ಎಲ್ಲರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗುರುಪುರ ವಲಯ ಅಧ್ಯಕ್ಷ ಸುರೇಂದ್ರ ಕಾಂಬ್ಳಿ ಧರ್ಮ ಗುರು ಫಾ. ಜೋಸೆಫ್ ಮಸ್ಕರೇನಸ್, ಧರ್ಮಗುರು‌ ಜಿ ಐ ಎಸ್ ಇಸ್ಮಾಯಿಲ್, ಸಮಾಜ ಸೇವಕ ಎಮ್ ಪ್ರೇಮಚಂದ್ರ ಭಟ್, ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ, ನೀರುಮಾರ್ಗ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ‌ ಯಶೋಧ ಜೆ ಸಾಲ್ಯಾ‌ನ್ ಉಪಸ್ಥಿತರಿದ್ದರು.

ಶ್ರೀಧರ್ ಸ್ವಾಗತಿಸಿದರು. ಸಂತೋಷ್ ಡಿ ಪಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು