1:21 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು: ಆಟವಾಡುತ್ತಾ ಪ್ರಾಣತೆತ್ತ ಕೂಸು

26/10/2021, 20:28

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಅಥಣಿ
ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ.

ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಅವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೇಟನಲ್ಲಿ ಆಟವಾಡುತ್ತಾ ಬಕೇಟ್ ಗೆ ಬಿದ್ದು ತನ್ನ  ಪ್ರಾಣವನ್ನು ಕಳೆದುಕೊಂಡಿದೆ.

ಮಗುವಿನ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದರು.ತಾಯಿ ಮಗುವನ್ನು ಆಟಾಡಲು ಬಿಟ್ಟು ಅಡುಗೆಮನೆ ಕೆಲಸದಲ್ಲಿ ತೊಡಗಿದ್ದರು. ಮಗು ಕಾಣಿಸದಿದ್ದಾಗ ಹುಡುಕಾಟ ನಡೆಸಿದಾಗ ಅಷ್ಟರಲ್ಲಿ ಮಗು ನೀರಿನ ಬಕೆಟಲ್ಲಿ ಕುತ್ತಿಗೆವರೆಗೆ ಮುಳಗಿ ಕಾಲುಗಳು ಮೇಲಕ್ಕೆ ಆಗಿದನ್ನ ಗಮನಿಸಿ ಮನೆಯವರು ತಕ್ಷಣ ಹೊರಗೆ ತೆಗೆದು ನೋಡಿದಾಗ ಅಸ್ಟೊತ್ತಿಗೆ ಮಗು ತನ್ನ ಪ್ರಾಣ ಕಳೆದುಕೊಂಡಿತ್ತು. ಮಗುವಿನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು