11:24 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ: ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಪತ್ತೆ

09/09/2022, 19:19

ಕುಂದಾಪುರ(reporterkarnataka.com): ನೀಟ್ ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತೆಂದು ಕುಂದಾಪುರದಲ್ಲಿ ನದಿಗೆ ಹಾರಿದ ವಿದ್ಯಾರ್ಥಿಯ ಮೃತದೇಹ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್‌ಬಿ ರಸ್ತೆಯ ನಿವಾಸಿ ರಘುವೀರ್ ಶೆಟ್ಟಿ ಅವರ ಪುತ್ರ ಸಾಯೀಶ್ ಶೆಟ್ಟಿ (18) ಮೃತಪಟ್ಟ ವಿದ್ಯಾರ್ಥಿ.

ಕಲಿಕೆಯಲ್ಲಿ ಸಾಕಷ್ಟು ಮುಂಚೂಣಿಯಲ್ಲಿದ್ದ ಸಾಯೀಶ್ ಈ ಬಾರಿಯ ನೀಟ್ ಪರೀಕ್ಷೆ ಬರೆದಿದ್ದರು. ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಅವರು ನೀಟ್ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ಬೆಳಗ್ಗೆ ಸೈಬರ್‌ ಕೇಂದ್ರಕ್ಕೆ ತೆರಳಿ ಫಲಿತಾಂಶ ನೋಡಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷೆಯಲ್ಲಿ ನಿರೀಕ್ಷೆಯಷ್ಟು ಅಂಕ ಬಂದಿಲ್ಲ ಎಂದು ಬೇಸರಗೊಂಡಿದ್ದ ಅವರು ಇದೇ ಕಾರಣಕ್ಕೆ ಗುರುವಾರ ಮಧ್ಯಾಹ್ನ 11.30ರ ವೇಳೆ ಸಂಗಮ್ ಸೇತುವೆಯ ಮೇಲಿನಿಂದ ಪಂಚಗಂಗಾವಳಿ ನದಿಗೆ ಹಾರಿದ್ದಾರೆನ್ನಲಾಗಿದೆ.

ಶಿವಮೊಗ್ಗದ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸದ ಮುಗಿಸಿದ್ದ ಸಾಯೀಶ್ ಶೆಟ್ಟಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರೆನ್ನಲಾಗಿದೆ. ನದಿಗೆ ಹಾರಿದ ವಿಷಯ ತಿಳಿಯುತ್ತಲೇ ಪೊಲೀಸರು, ಅಗ್ನಿಶಾಮಕ ದಳ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರು ಸಾಯೀಶ್ ರಿಗಾಗಿ ಶೋಧ ನಡೆಸಿದ್ದರೂ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದರಿಂದ ಪತ್ತೆ ಸಾಧ್ಯವಾಗಿರಲಿಲ್ಲ. ಇಂದು ಬೆಳಗ್ಗೆ ಬೈಂದೂರು ತಾಲೂಕಿನ ನಾವುಂದ ಸಮುದ್ರ ತೀರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು