5:18 PM Sunday20 - July 2025
ಬ್ರೇಕಿಂಗ್ ನ್ಯೂಸ್
SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ…

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಒಳ ಉಡುಪು ಕಳಚಲು ಸೂಚಿಸಿದ ವಿವಾದ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ

19/07/2022, 23:07

ಸಾಂದರ್ಭಿಕ ಚಿತ್ರ
ತಿರುವನಂತಪುರ(reporterkarnataka.com): ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿ ಹೊಸ ವಿಚಾರವನ್ನೇ ಸೃಷ್ಟಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸ್ವತಂತ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರಿಗೆ ಪತ್ರ ಬರೆದಿದೆ.

ಇದು ಅತಿರೇಕದ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದ್ದು, ವಿದ್ಯಾರ್ಥಿನಿಯರು ಮಾಡಿರುವ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಕಾಲಮಿತಿಯೊಳಗೆ ತನಿಖೆ ನಡೆಸಿ, ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕೇರಳ ಪೊಲೀಸ್ ಮಹಾನಿರ್ದೇಶಕರಿಗೂ ಆಯೋಗ ಪತ್ರ ಬರೆದಿದ್ದು, ನ್ಯಾಯಯುತವಾಗಿ ತನಿಖೆ ನಡೆಯಬೇಕು ಮತ್ತು ಒಂದು ವೇಳೆ ಆರೋಪ ಸತ್ಯವೆಂದು ಕಂಡು ಬಂದಲ್ಲಿ ಸಂಬಂಧಿಸಿದ ಕಾನೂನಿನಡಿ ಎಫ್ ಐಆರ್ ದಾಖಲಿಸಬೇಕು. ಮೂರು ದಿನಗಳೊಳಗೆ ಕ್ರಮ ಕೈಗೊಳ್ಳಬೇಕು ಎಂದು ಎನ್ ಸಿ ಡಬ್ಲ್ಯೂ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು