1:24 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ನೀಟ್ ಪರೀಕ್ಷೆಯಲ್ಲಿ ಒಳ ಉಡುಪು ಕಳಚಲು ಸೂಚಿಸಿದ ವಿವಾದ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ

19/07/2022, 23:07

ಸಾಂದರ್ಭಿಕ ಚಿತ್ರ
ತಿರುವನಂತಪುರ(reporterkarnataka.com): ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿ ಹೊಸ ವಿಚಾರವನ್ನೇ ಸೃಷ್ಟಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಸ್ವತಂತ್ರ ತನಿಖೆ ನಡೆಸುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರಿಗೆ ಪತ್ರ ಬರೆದಿದೆ.

ಇದು ಅತಿರೇಕದ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದ್ದು, ವಿದ್ಯಾರ್ಥಿನಿಯರು ಮಾಡಿರುವ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಕಾಲಮಿತಿಯೊಳಗೆ ತನಿಖೆ ನಡೆಸಿ, ಘಟನೆಗೆ ಕಾರಣರಾದವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕೇರಳ ಪೊಲೀಸ್ ಮಹಾನಿರ್ದೇಶಕರಿಗೂ ಆಯೋಗ ಪತ್ರ ಬರೆದಿದ್ದು, ನ್ಯಾಯಯುತವಾಗಿ ತನಿಖೆ ನಡೆಯಬೇಕು ಮತ್ತು ಒಂದು ವೇಳೆ ಆರೋಪ ಸತ್ಯವೆಂದು ಕಂಡು ಬಂದಲ್ಲಿ ಸಂಬಂಧಿಸಿದ ಕಾನೂನಿನಡಿ ಎಫ್ ಐಆರ್ ದಾಖಲಿಸಬೇಕು. ಮೂರು ದಿನಗಳೊಳಗೆ ಕ್ರಮ ಕೈಗೊಳ್ಳಬೇಕು ಎಂದು ಎನ್ ಸಿ ಡಬ್ಲ್ಯೂ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು