3:20 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ನೀಟ್, ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ: ಎಸ್ ಐಓ ವತಿಯಿಂದ ಬಿ.ಸಿ. ರೋಡಿನಲ್ಲಿ ಪ್ರತಿಭಟನೆ

30/06/2024, 13:24

ಬಿ.ಸಿ.ರೋಡ್(reporterkarnataka.com): ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್ ಐಓ ಪಾಣೆಮಂಗಳೂರು ಶಾಖೆಯ ವತಿಯಿಂದ ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದ ಉನ್ನತ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಹಾಗೂ ಈ ಅವ್ಯವಹಾರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NTA)ದ ಪಾತ್ರದ ಕುರಿತು ತನಿಖೆ ನಡೆಸಬೇಕೆಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಕಾನೂನು ವಿದ್ಯಾರ್ಥಿ ನಿಹಾಲ್ ಕುದ್ರೋಳಿ , ಜಿಲ್ಲಾ ಕಾರ್ಯದರ್ಶಿ ಸಲ್ವಾನ್ ಬೋಳಂಗಡಿ, ಪಾಣೆಮಂಗಳೂರು ಶಾಖಾಧ್ಯಕ್ಷ ಮುತಹ್ಹರ್ ಸಾಬ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು