12:13 PM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ?  ಉದ್ದಿಮೆ ವಿಸ್ತರಣೆ ಬಯಸುವಿರಾ?  ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ !

31/07/2021, 07:28

ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‍ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ ಇತ್ಯಾದಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು