12:10 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ?  ಉದ್ದಿಮೆ ವಿಸ್ತರಣೆ ಬಯಸುವಿರಾ?  ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ !

31/07/2021, 07:28

ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‍ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ ಇತ್ಯಾದಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು