3:37 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ನೀವು ಕಿರು ಆಹಾರ ಸಂಸ್ಕರಣೆ ಉದ್ದಿಮೆದಾರರೇ?  ಉದ್ದಿಮೆ ವಿಸ್ತರಣೆ ಬಯಸುವಿರಾ?  ಹಾಗಾದರೆ ಸಿಗಲಿದೆ ನಿಮಗೆ ಸರಕಾರದ ಸಹಾಯಧನ !

31/07/2021, 07:28

ಮಂಗಳೂರು (reporterkarnataka.com): ಕಿರು ಆಹಾರ ಸಂಸ್ಕರಣೆ ಉದ್ದಿಮೆ ಸ್ಥಾಪಿಸಿಕೊಂಡು ಕಾರ್ಯ ನಿರ್ವಹಿಸುತ್ತಿರುವವರ ಉದ್ದಿಮೆಗಳನ್ನು ವಿಸ್ತರಿಸಿಕೊಳ್ಳಲು ಸರ್ಕಾರದಿಂದ ಸಹಾಯಧನ ನೀಡಲಾಗುತ್ತಿದೆ.
ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬಳಸಿಕೊಂಡು ಉದ್ದಿಮೆ ನಿರ್ವಹಿಸುತ್ತಿರುವ ಗೇರು ಸಂಸ್ಕರಣೆ, ತೆಂಗಿನ ಎಣ್ಣೆಯ ಮಿಲ್‍ಗಳು, ಉಪ್ಪಿನಕಾಯಿ ತಯಾರಿ ಘಟಕ, ಜ್ಯೂಸ್ ತಯಾರಿ ಘಟಕ, ಸಾಂಬಾರು ಪುಡಿ ತಯಾರಿ ಘಟಕ, ಹಲಸಿನ ಹಪ್ಪಳ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ, ಬಾಳೆಕಾಯಿ ಚಿಪ್ಸ್ ಹಾಗೂ ಇತರೆ ಉತ್ಪನ್ನ ತಯಾರಿ ಘಟಕ ಇತ್ಯಾದಿ ಘಟಕಗಳಿಗೆ ಈ ಯೋಜನೆಯಲ್ಲಿರುವ ವಿಪುಲ ಅವಕಾಶಗಳ ಕುರಿತು ಮಾಹಿತಿ ಶಿಬಿರ ಹಾಗೂ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಯೋಜನೆಯಡಿ ಉದ್ದಿಮೆದಾರರಿಗೆ ಅಗತ್ಯ ಸಂಪನ್ಮೂಲ ಮಾಹಿತಿ ಹಾಗೂ ಯೋಜನಾ ವರದಿ ತಯಾರಿಗೆ ನೆರವು ನೀಡಲಾಗುವುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು