3:52 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ನೇಜಾರು ಒಂದೇ ಕುಟುಂಬದ 4 ಮಂದಿಯ ಭೀಕರ ಹತ್ಯಾಕಾಂಡ: ಪ್ರತ್ಯಕ್ಷದರ್ಶಿ ಗಾಯಾಳು ಮಹಿಳೆ ಆಸ್ಪತ್ರೆಯಿಂದ ಬಿಡುಗಡೆ

14/11/2023, 15:06

ಉಡುಪಿ(reporterkarnataka.com): ಇಲ್ಲಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯಾಕಾಂಡ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದ ಮಹಿಳೆ ಮಂಗಳವಾರ ಬಿಡುಗಡೆಗೊಂಡಿದ್ದಾರೆ.
ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ ನಾಲ್ವರಲ್ಲಿ ಹಸೀನಾ ಅವರ ಅತ್ತೆಯಾದ ಹಾಜಿರಾ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಹಂತಕ ನಾಲ್ವರನ್ನು ಕೊಂದ ಬಳಿಕ ಹಾಜಿರಾ ಅವರ ಮೇಲೆಯೂ ಚಾಕುವಿನಿಂದ ದಾಳಿ ನಡೆಸಿದ್ದ. ಗಾಯಗೊಂಡ ಹಾಜಿರಾ ಅವರು ತಪ್ಪಿಸಿಕೊಂಡು ಓಡಿ ಹೋಗಿ ಬಾತ್ ರೂಮ್ ನಲ್ಲಿ ಅಡಗಿ ಕುಳಿತಿದ್ದರು. ಈ ಭೀಕರ ಹತ್ಯಾಕಾಂಡದ ಪ್ರತ್ಯಕ್ಷದರ್ಶಿ ಇವರಾಗಿದ್ದಾರೆ.
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹಾಜಿರಾ ಅವರನ್ನು ಇದೀಗ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಎರಡು ಕಡೆ ಚಾಕು ಇರಿತಕ್ಕೊಳಗಾದ ಹಾಜಿರಾ ಅವರಿಗೆ ವೈದ್ಯರು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು