7:09 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಐಕ್ಯತಾ ಸಪ್ತಾಹ; ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಉಪನ್ಯಾಸ

02/12/2022, 18:44

ನೆಲ್ಯಾಡಿ(reporterkarnataka.com):
ವಿಶ್ವವಿದ್ಯಾನಿಲಯ ಘಟಕ ಕಾಲೇಜು, ನೆಲ್ಯಾಡಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಡಿಯಲ್ಲಿ ‘ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ’ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರಾಯಚೂರಿನ ಮಸ್ಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರಜಿಯಾ ಎಂ. ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ಚರ್ಚಿಸಿದಷ್ಟು ಮುಗಿಯದ ಒಂದು ಅಂತರ್ಗತ ವಿಷಯವಾಗಿದೆ. ಪರಿಸರವನ್ನು ಸಂರಕ್ಷಿಸಿ ನಾವು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕಾಗಿದೆ. ಮಾನವನು ತನ್ನ ಸ್ವಹಿತದ ಸಾಧನೆಗೆ ಪ್ರಕೃತಿಯನ್ನು ಶೋಷಿಸುವುದು ಸರಿಯಲ್ಲ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನೂರಂದಪ್ಪ ಅವರು ವಹಿಸಿದ್ದರು. ಆರ್ಥಿಕ ಅಭಿವೃದ್ಧಿಯು ಪ್ರಕೃತಿಗೆ ಹಾನಿಕಾರಕವಾಗಬಾರದು, ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕು ಎಂದು ಅವರು ನುಡಿದರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಅರ್ಥಶಾಸ್ತ್ರ ಸಂಘದ ಸಂಯೋಜಕರಾದ ಶ್ರುತಿ ಸ್ವಾಗತಿಸಿದರು. ಅರ್ಥಶಾಸ್ತ್ರ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಧನ್ಯಶ್ರೀ ಅತಿಥಿಗಳ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಫೂರ್ತಿ ಕೆ.ಟಿ. ವಂದಿಸಿದರು. ವಿದ್ಯಾರ್ಥಿನಿ ನುಸ್ರಿಲ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಅರ್ಥಶಾಸ್ತ್ರ ಸಂಘದ ಸಹ ಕಾರ್ಯದರ್ಶಿ ಸಂದೀಪ್ ಕುಮಾರ್ ಬಿ.ಎಂ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು