6:42 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಐಕ್ಯತಾ ಸಪ್ತಾಹ; ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಉಪನ್ಯಾಸ

02/12/2022, 18:44

ನೆಲ್ಯಾಡಿ(reporterkarnataka.com):
ವಿಶ್ವವಿದ್ಯಾನಿಲಯ ಘಟಕ ಕಾಲೇಜು, ನೆಲ್ಯಾಡಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಡಿಯಲ್ಲಿ ‘ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ’ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರಾಯಚೂರಿನ ಮಸ್ಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರಜಿಯಾ ಎಂ. ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ಚರ್ಚಿಸಿದಷ್ಟು ಮುಗಿಯದ ಒಂದು ಅಂತರ್ಗತ ವಿಷಯವಾಗಿದೆ. ಪರಿಸರವನ್ನು ಸಂರಕ್ಷಿಸಿ ನಾವು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕಾಗಿದೆ. ಮಾನವನು ತನ್ನ ಸ್ವಹಿತದ ಸಾಧನೆಗೆ ಪ್ರಕೃತಿಯನ್ನು ಶೋಷಿಸುವುದು ಸರಿಯಲ್ಲ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನೂರಂದಪ್ಪ ಅವರು ವಹಿಸಿದ್ದರು. ಆರ್ಥಿಕ ಅಭಿವೃದ್ಧಿಯು ಪ್ರಕೃತಿಗೆ ಹಾನಿಕಾರಕವಾಗಬಾರದು, ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕು ಎಂದು ಅವರು ನುಡಿದರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಅರ್ಥಶಾಸ್ತ್ರ ಸಂಘದ ಸಂಯೋಜಕರಾದ ಶ್ರುತಿ ಸ್ವಾಗತಿಸಿದರು. ಅರ್ಥಶಾಸ್ತ್ರ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಧನ್ಯಶ್ರೀ ಅತಿಥಿಗಳ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಫೂರ್ತಿ ಕೆ.ಟಿ. ವಂದಿಸಿದರು. ವಿದ್ಯಾರ್ಥಿನಿ ನುಸ್ರಿಲ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಅರ್ಥಶಾಸ್ತ್ರ ಸಂಘದ ಸಹ ಕಾರ್ಯದರ್ಶಿ ಸಂದೀಪ್ ಕುಮಾರ್ ಬಿ.ಎಂ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು