11:52 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನೆಲ್ಯಾಡಿ: ರಾಷ್ಟ್ರೀಯ ಐಕ್ಯತಾ ಸಪ್ತಾಹ; ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಉಪನ್ಯಾಸ

02/12/2022, 18:44

ನೆಲ್ಯಾಡಿ(reporterkarnataka.com):
ವಿಶ್ವವಿದ್ಯಾನಿಲಯ ಘಟಕ ಕಾಲೇಜು, ನೆಲ್ಯಾಡಿಯಲ್ಲಿ ಇತ್ತೀಚೆಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಡಿಯಲ್ಲಿ ‘ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ’ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಅರ್ಥಶಾಸ್ತ್ರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ರಾಯಚೂರಿನ ಮಸ್ಕಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರಜಿಯಾ ಎಂ. ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಸ್ಥಿರ ಅಭಿವೃದ್ಧಿಯು ಚರ್ಚಿಸಿದಷ್ಟು ಮುಗಿಯದ ಒಂದು ಅಂತರ್ಗತ ವಿಷಯವಾಗಿದೆ. ಪರಿಸರವನ್ನು ಸಂರಕ್ಷಿಸಿ ನಾವು ಆರ್ಥಿಕ ಪ್ರಗತಿಯನ್ನು ಸಾಧಿಸಬೇಕಾಗಿದೆ. ಮಾನವನು ತನ್ನ ಸ್ವಹಿತದ ಸಾಧನೆಗೆ ಪ್ರಕೃತಿಯನ್ನು ಶೋಷಿಸುವುದು ಸರಿಯಲ್ಲ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ನೂರಂದಪ್ಪ ಅವರು ವಹಿಸಿದ್ದರು. ಆರ್ಥಿಕ ಅಭಿವೃದ್ಧಿಯು ಪ್ರಕೃತಿಗೆ ಹಾನಿಕಾರಕವಾಗಬಾರದು, ಸಂಪನ್ಮೂಲಗಳನ್ನು ಮಿತವಾಗಿ ಬಳಸಿಕೊಂಡು ಮುಂದಿನ ಪೀಳಿಗೆಗೂ ಕಾಪಾಡಿಕೊಳ್ಳಬೇಕು ಎಂದು ಅವರು ನುಡಿದರು.
ಕಾರ್ಯಕ್ರಮದ ಸಂಚಾಲಕರು ಹಾಗೂ ಅರ್ಥಶಾಸ್ತ್ರ ಸಂಘದ ಸಂಯೋಜಕರಾದ ಶ್ರುತಿ ಸ್ವಾಗತಿಸಿದರು. ಅರ್ಥಶಾಸ್ತ್ರ ಸಂಘದ ವಿದ್ಯಾರ್ಥಿ ಕಾರ್ಯದರ್ಶಿ ಧನ್ಯಶ್ರೀ ಅತಿಥಿಗಳ ವ್ಯಕ್ತಿ ಪರಿಚಯ ಮಾಡಿಕೊಟ್ಟರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಸ್ಫೂರ್ತಿ ಕೆ.ಟಿ. ವಂದಿಸಿದರು. ವಿದ್ಯಾರ್ಥಿನಿ ನುಸ್ರಿಲ್ ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯಲ್ಲಿ ಅರ್ಥಶಾಸ್ತ್ರ ಸಂಘದ ಸಹ ಕಾರ್ಯದರ್ಶಿ ಸಂದೀಪ್ ಕುಮಾರ್ ಬಿ.ಎಂ ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು