1:28 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು