6:37 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು