8:24 PM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು