2:36 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು