12:01 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು