6:52 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜು: ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮ

30/08/2024, 14:15

ಮಂಗಳೂರು(reporterkarnataka.com): ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಯೋಗದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಉದ್ಯೋಗ ನೋಂದಣಿ ಹಾಗೂ ವೃತ್ತಿ ಮಾರ್ಗದರ್ಶನ’ ಕಾರ್ಯಕ್ರಮದಡಿ ತರಬೇತು ಕಾರ್ಯಕ್ರಮ ನಡೆಯಿತು.

ಮಂಗಳೂರು ಸಂಸ್ಥೆಯ ಕೌನ್ಸಿಲರ್ ಕಂ ಟ್ರೈನರ್ ಮಂಜೂಷ ಅವರು ಕಾಲೇಜಿನ ಸಂಯೋಜಕರಾದ ಡಾ. ಸುರೇಶ್ ಅವರ ಅನುಮತಿಯೊಂದಿಯೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ
ತರಬೇತು ಕಾರ್ಯಕ್ರಮ ನಡೆಸಿಕೊಟ್ಟರು. ವಿದ್ಯಾರ್ಥಿಗಳನ್ನು ಉದ್ಯೋಗಕ್ಕೆ ನೋಂದಣಿ ಮಾಡಿಸುವುದರ ಮೂಲಕ ಉದ್ಯೋಗ ಕಾರ್ಡ್ ನೀಡಿ ವಿದ್ಯಾರ್ಥಿಗಳಿಗೆ ಅದರ ಉಪಯುಕ್ತತೆ ಹಾಗೂ ಬಳಸುವಿಕೆಯ ಕುರಿತಂತೆ ಮಾಹಿತಿ ನೀಡಿದರು. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಒದಗಿಸುವುದರೊಂದಿಗೆ, ಹೇಗೆ ಸಂದರ್ಶನ ಎದುರಿಸುವುದು ಎಂಬುದರ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡುವುದರೊಂದಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಸೀತಾರಾಮ ಪಿ. (ಮುಖ್ಯಸ್ಥರು, ಇತಿಹಾಸ ವಿಭಾಗ) ಸ್ವಾಗತಿಸಿದರು.ಪಾವನ ರೈ (ಉಪನ್ಯಾಸಕಿ, ವಾಣಿಜ್ಯ ವಿಭಾಗ) ವಂದಿಸಿದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು