7:22 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು