3:23 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

17/08/2022, 08:49

ನೆಲ್ಯಾಡಿ(reporterkarnataka.com):
ನೆಲ್ಯಾಡಿ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

ದೈಹಿಕ ಶಿಕ್ಷಣ ನಿರ್ದೇಶಕ ಆನಂದ ಕೆ,ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿತು. ಅಧ್ಯಕ್ಷತೆಯನ್ನು ಡಾ.ಜಯರಾಜ್ ಎನ್.(ಸಂಯೋಜಕರು ವಿ.ವಿ. ಕಾಲೇಜು ನೆಲ್ಯಾಡಿ)  ಅವರ ಅನುಪಸ್ಥಿತಿಯಲ್ಲಿ ಡಾ. ಸೀತಾರಾಮ ಪಿ. (ಸಹ ಸಂಯೋಜಕ ವಿ.ವಿ. ಕಾಲೇಜು ನೆಲ್ಯಾಡಿ) ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಮತ್ತು ತರಬೇತುದಾರರಾದ ಮನೋಜ್ ಕೆ.ವಿ. ಭಾಗವಹಿಸಿದರು. 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಅನುಭವಗಳನ್ನು ತೆರೆದಿಡುತ್ತಾ, “ಪರಿಶ್ರಮ ಶಿಸ್ತಿನಿಂದ ಹಳ್ಳಿಯಿಂದಲೂ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗಲು ಸಾಧ್ಯ. ಇದಕ್ಕಾಗಿ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದರು. 

ಕಾರ್ಯಕ್ರಮದಲ್ಲಿ ಉಷಾ ಅಂಚನ್, (ಅಧ್ಯಕ್ಷರು, ಅನುಷ್ಠಾನ ಸಮಿತಿ, ವಿ.ವಿ. ಕಾಲೇಜು ನೆಲ್ಯಾಡಿ)ಅವರು ಮಾತನಾಡಿ, ಪ್ರತಿಭೆಗಳು ಅವಕಾಶಗಳನ್ನು ಬಳಸಿಕೊಳ್ಳುವುದರೊಂದಿಗೆ ಬೆಳೆಯಲಿ, ಗುರುತಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಪ್ರಾರ್ಥನೆಯ ಮುಖಾಂತರ ಚಾಲನೆ ನೀಡಿದರು. ವೆರೋನಿಕಾ ಪ್ರಭಾ ವಿ. ಪಿ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಮನೋಜ್ ಕೆ. ವಿ.  ಅವರ ಪರಿಚಯವನ್ನು ಆನಂದ ಕೆ. ದೈಹಿಕ ನಿರ್ದೇಶಕರು ಮಾಡಿದರು. ಡಾ. ನೂರಂದಪ್ಪ, (ಮುಖ್ಯಸ್ಥರು, ಕನ್ನಡ ವಿಭಾಗ)ವಂದಿಸಿದರು. ದಿವ್ಯಶ್ರೀ ಜಿ, (ವಾಣಿಜ್ಯ ವಿಭಾಗ,) ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು