10:31 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ

01/06/2023, 23:09

ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಆಂಡ್ ಎಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ವರುಣ್ ಕೆ. ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಉದ್ಯೋಗ ಪಡೆಯಲು ಬೇಕಾದ ಮೂಲಭೂತ ಆರ್ಹತೆಗಳು, ಕೌಶಲ್ಯಗಳು ಹಾಗೂ ಸಂದರ್ಶನವನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಬೇಕಾಗುವ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳೊಂದಿಗೆ ಪ್ರಾಯೋಗಿಕ ನಿದರ್ಶನಗಳ ಮೂಲಕ ಸಂವಾದ ನಡೆಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಹ ಸಂಯೋಜಕರಾದ ಡಾ. ಸೀತಾರಾಮ ಪಿ., ಪ್ರಸ್ತುತ ಜಾಗತೀಕರಣದ ಪರಿಣಾಮದಿಂದ ಖಾಸಗೀಕರಣದ ಪಾಲುದಾರಿಕೆಯಿಂದ ಔದ್ಯೋಗಿಕ ಕ್ಷೇತ್ರವು ಅನಿರಿಕ್ಷೀತ ಬದಲಾವಣೆಗಳನ್ನು ಕಂಡಿದೆ. ಒಬ್ಬ ಸಾಮಾನ್ಯ ವ್ಯಕ್ತಿಯು ಕೂಡ ಅಲ್ಪ ಬಂಡವಾಳದೊಂದಿಗೆ ಕೌಶಲ್ಯ ಮತ್ತು ದೂರದೃಷ್ಟಿಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪೂರಕವಾದ ವಾತಾವರಣವು ಈ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರದ ಬಗ್ಗೆ ಜ್ಞಾನ ಪಡೆದುಕೊಳ್ಳುವುದು ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಾಣಿಜ್ಯ ಸಂಘದ ಸಂಚಾಲಕರಾದ ದಿವ್ಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆರೋನಿಕಾ ಪ್ರಭಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ದಿವ್ಯ ಶ್ರೀ ಜಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು