2:56 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ನೆಲ್ಯಾಡಿ ವಿವಿ ಕಾಲೇಜು: ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರ

01/06/2023, 23:09

ಉಪ್ಪಿನಂಗಡಿ(reporterkarnataka.com): ನೆಲ್ಯಾಡಿಯ ವಿವಿ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಪ್ರಸ್ತುತ ಔದ್ಯೋಗಿಕ ಮಾರುಕಟ್ಟೆಗೆ ಹೊಂದಿಕೊಳ್ಳುವ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ಇನ್ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿ ಆಂಡ್ ಎಂಜಿನಿಯರಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ವರುಣ್ ಕೆ. ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಯಾವುದೇ ಉದ್ಯೋಗ ಪಡೆಯಲು ಬೇಕಾದ ಮೂಲಭೂತ ಆರ್ಹತೆಗಳು, ಕೌಶಲ್ಯಗಳು ಹಾಗೂ ಸಂದರ್ಶನವನ್ನು ಎದುರಿಸಲು ವಿದ್ಯಾರ್ಥಿಗಳಿಗೆ ಬೇಕಾಗುವ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯಗಳ ಬಗ್ಗೆ ಸವಿವರವಾಗಿ ಮಾಹಿತಿಯನ್ನು ನೀಡುತ್ತಾ ವಿದ್ಯಾರ್ಥಿಗಳೊಂದಿಗೆ ಪ್ರಾಯೋಗಿಕ ನಿದರ್ಶನಗಳ ಮೂಲಕ ಸಂವಾದ ನಡೆಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಹ ಸಂಯೋಜಕರಾದ ಡಾ. ಸೀತಾರಾಮ ಪಿ., ಪ್ರಸ್ತುತ ಜಾಗತೀಕರಣದ ಪರಿಣಾಮದಿಂದ ಖಾಸಗೀಕರಣದ ಪಾಲುದಾರಿಕೆಯಿಂದ ಔದ್ಯೋಗಿಕ ಕ್ಷೇತ್ರವು ಅನಿರಿಕ್ಷೀತ ಬದಲಾವಣೆಗಳನ್ನು ಕಂಡಿದೆ. ಒಬ್ಬ ಸಾಮಾನ್ಯ ವ್ಯಕ್ತಿಯು ಕೂಡ ಅಲ್ಪ ಬಂಡವಾಳದೊಂದಿಗೆ ಕೌಶಲ್ಯ ಮತ್ತು ದೂರದೃಷ್ಟಿಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ವಿಯಾಗಲು ಪೂರಕವಾದ ವಾತಾವರಣವು ಈ ಸಂದರ್ಭದಲ್ಲಿ ಕಾಣುತ್ತಿದ್ದೇವೆ. ಹಾಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಕೌಶಲ್ಯಾಧಾರಿತ ಉದ್ಯಮ ಕ್ಷೇತ್ರದ ಬಗ್ಗೆ ಜ್ಞಾನ ಪಡೆದುಕೊಳ್ಳುವುದು ಮಹತ್ವದ್ದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಾಣಿಜ್ಯ ಸಂಘದ ಸಂಚಾಲಕರಾದ ದಿವ್ಯ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೆರೋನಿಕಾ ಪ್ರಭಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ದಿವ್ಯ ಶ್ರೀ ಜಿ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ , ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು