4:40 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ನೇಣು ಬಿಗಿದು ಯುವಕ ಆತ್ಮಹತ್ಯೆ: ಸಾವಿಗೆ ಮುನ್ನ ಆತ ಡೆತ್ ನೋಟ್ ನಲ್ಲಿ ಬರೆದದ್ದು ಏನು? ಆತನಿಗೆ ಕಿರುಕುಳ ಕೊಟ್ಟವನು ಯಾರು?

21/06/2023, 21:21

ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಕಾಪಿಕಾಡು ಬಳಿಯ ಸತ್ಯನಾರಾಯಣ ಕಂಪೌಂಡ್ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ.
ಸತ್ಯನಾರಾಯಣ ಕಂಪೌಂಡ್‌ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತಿನ್ ಇಂದು ಮಧ್ಯಾಹ್ನ ತನ್ನ ಮನೆಯ ಕೋಣೆಯೊಳಗೆ ಹೋಗಿ ಬಾಗಿಲು ಮುಚ್ಚಿದ್ದ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದಿರುವುದು ಕಂಡು ಬಂತು.



ನಿತಿನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದಾನೆ ಎಂದು ತಿಳಿದು ಬಂದಿದೆ. ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ಇವನಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿ ವಿನಂತಿ ಎಂದು ಬರೆದಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು