1:58 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನೇಣು ಬಿಗಿದು ಯುವಕ ಆತ್ಮಹತ್ಯೆ: ಸಾವಿಗೆ ಮುನ್ನ ಆತ ಡೆತ್ ನೋಟ್ ನಲ್ಲಿ ಬರೆದದ್ದು ಏನು? ಆತನಿಗೆ ಕಿರುಕುಳ ಕೊಟ್ಟವನು ಯಾರು?

21/06/2023, 21:21

ಉಳ್ಳಾಲ(reporterkarnataka.com): ತೊಕ್ಕೊಟ್ಟು ಸಮೀಪದ ಕಾಪಿಕಾಡು ಬಳಿಯ ಸತ್ಯನಾರಾಯಣ ಕಂಪೌಂಡ್ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ.
ಸತ್ಯನಾರಾಯಣ ಕಂಪೌಂಡ್‌ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿತಿನ್ ಇಂದು ಮಧ್ಯಾಹ್ನ ತನ್ನ ಮನೆಯ ಕೋಣೆಯೊಳಗೆ ಹೋಗಿ ಬಾಗಿಲು ಮುಚ್ಚಿದ್ದ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದಿರುವುದು ಕಂಡು ಬಂತು.



ನಿತಿನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಡೆತ್ ನೋಟ್ ಬರೆದಿದ್ದಾನೆ ಎಂದು ತಿಳಿದು ಬಂದಿದೆ. ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ಇವನಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿ ವಿನಂತಿ ಎಂದು ಬರೆದಿದ್ದಾನೆ ಎಂದು ತಿಳಿದು ಬಂದಿದೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು