12:11 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನೇಣು ಬಿಗಿದುಕೊಂಡು ಯುವ ಗೃಹಿಣಿ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳದಿಂದ ಸಾವಾಗಿದೆ ಎಂದು ಪೋಷಕರ ದೂರು

17/02/2022, 10:53

ಮೈಸೂರು(reporterkarnataka.com): ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ.

ನಂದಿನಿ (26) ಮೃತಳು. ಕಳೆದೆರಡು ವರ್ಷಗಳ ಹಿಂದೆ ಜನತಾನಗರದ ವಿಜಿ ಎಂಬಾತನನ್ನು ಈಕೆ ವಿವಾಹವಾಗಿದ್ದಳು. ದಂಪತಿಗೆ ಹತ್ತು ತಿಂಗಳ ಮಗು ಕೂಡ ಇದೆ.

ಮಹಿಳೆಯ ಪತಿ ಖಾಸಗಿ ಕಂಪನಿಯಲ್ಲಿ ಕಂಪ್ಯೂಟರ್ ಉದ್ಯೋಗಿಯಾಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಇದರ ನಡುವೆ ನಂದಿನಿ ಗಂಡನೊAದಿಗೆ ಜಗಳವಾಡಿಕೊಂಡು, ಆತ ಬೇರೆ ರೂಮ್‌ನಲ್ಲಿ ಮಲಗಿದ್ದಾಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಮೃತ ಮಹಿಳೆಯ ಕುಟುಂಬಸ್ಥರು ಇದೊಂದು ವರದಕ್ಷಿಣೆ ಕಿರುಕುಳದ ಸಾವಾಗಿದೆ ಎಂದು ಆರೋಪಿಸಿ ಸರಸ್ವತಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು