2:45 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು