11:58 AM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು