2:12 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಎನ್‌ಇಪಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಗೆ ಬಹಳಷ್ಟು ಪ್ರಾಮುಖ್ಯತೆ ನೀಡಲಾಗಿದೆ: ಡಾ.ನಾಗರತ್ನ ಕೆ.ಎ

07/12/2021, 12:12

ಮಂಗಳೂರು(reporterkarnataka.com): ಉರ್ವ ಸ್ವಸ್ತಿಕ್ ಕಾಲೇಜಿನಲ್ಲಿ  ರಾ.ಸೆ.ಯೋ ಘಟಕ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹೊಸ  ಶಿಕ್ಷಣ  ನೀತಿ(ಎನ್‌ಇಪಿ)ಯಲ್ಲಿ  ರಾಷ್ಟ್ರೀಯ ಸೇವಾ ಯೋಜನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅನೇಕ ಸೇವಾ ಕಾರ್ಯಗಳನ್ನು ಮಾಡಿರುವ ಸ್ವಯಂ ಸೇವಕರ ಮೂಲಕ ಏಡ್ಸ್ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸದ್ಬಳಕೆ ಮಾಡಿದರೆ  ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸಲು ಸಾಧ್ಯ ಎಂದು ಅವರು  ಹೇಳಿದರು. ನಂತರ ರಾ.ಸೆ.ಯೋ ಪ್ರತಿಜ್ಞಾ ವಿಧಿ ಬೋಧಿಸಿದರು. 

ತೇಜಸ್ವಿನಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಡಾ.ಕಬ್ಬಿನೆಲೆ ಬಾಲಕೃಷ್ಣ ಭಾರದ್ವಾಜ್ ಮಾತನಾಡಿ, ಭಾಷೆಯನ್ನು ಕೇವಲ ಮಾತನಾಡಲು ಬಳಸುವುದು ಮಾತ್ರವಲ್ಲದೆ ಅದರ ಆಳ ಆಂತರ್ಯವನ್ನು ತಿಳಿಯುವ ಪ್ರಯತ್ನವನ್ನು ಮಾಡಬೇಕು. ಆಗ ಮಾತ್ರ ಸಾಂಸ್ಕೃತಿಕ ಬೆಳವಣಿಗೆ ಸಾಧ್ಯ ಎಂದು ಹೇಳಿದರು.



ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲರಾದ ಡಾ.ಮಾಲಿನಿ  ಹೆಬ್ಬಾರ್ ವಹಿಸಿದ್ದರು. ಕಾಲೇಜಿನ ನಿರ್ದೇಶಕ ರಾಘವೇಂದ್ರ ಹೊಳ್ಳ, ವಿದ್ಯಾರ್ಥಿ ಸಂಘದ ಕ್ಷೇಮಪಾಲನಾ ಅಧಿಕಾರಿ ಯತೀಂದ್ರ ಅತ್ತಾವರ ಹಾಗೂ ರಾ.ಸೆ.ಯೋ ಯೋಜನಾಧಿಕಾರಿ ವಿದ್ಯಾಲಕ್ಷ್ಮಿ ಶೆಟ್ಟಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು