12:10 PM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ನೇಪಾಳದಲ್ಲಿ ಪ್ರಬಲ ಭೂಕಂಪ: ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭೂಕಂಪನ

03/10/2023, 16:44

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ.
ನೇಪಾಳದಲ್ಲಿ ಎರಡು ಭೂಕಂಪಗಳ ನಂತರ ಇಂದು ದೆಹಲಿಯಲ್ಲಿ ಭಾರೀ ಕಂಪನಗಳು ಸಂಭವಿಸಿವೆ . ಒಂದು ರಿಕ್ಟರ್ ಮಾಪಕದಲ್ಲಿ 4.6 ಮತ್ತು ಇನ್ನೊಂದು 6.2 ದಾಖಲಾಗಿದೆ. ಭೂಮಿಯಲ್ಲಿ
5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ. ನೇಪಾಳದಲ್ಲಿ ಮೊದಲ ಭೂಕಂಪ ಮಧ್ಯಾಹ್ನ 2:25 ಕ್ಕೆ ಸಂಭವಿಸಿತು, ಎರಡನೆಯದು ಮಧ್ಯಾಹ್ನ 2:51ಕ್ಕೆ ನಡೆಯಿತು.
“ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2 ದಾಖಲಾಗಿದೆ. ಇದು 5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಹೇಳಿಕೆಯಲ್ಲಿ ತಿಳಿಸಿದೆ.
ಹಾಗೆ ದೆಹಲಿ ಮತ್ತು ಇತರ ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ. ಉತ್ತರ ಪ್ರದೇಶದ ಲಕ್ನೋ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪಗಳ ನಂತರ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನಗಳು ಸಂಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು