12:12 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನೇಪಾಳದಲ್ಲಿ ಪ್ರಬಲ ಭೂಕಂಪ: ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭೂಕಂಪನ

03/10/2023, 16:44

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ.
ನೇಪಾಳದಲ್ಲಿ ಎರಡು ಭೂಕಂಪಗಳ ನಂತರ ಇಂದು ದೆಹಲಿಯಲ್ಲಿ ಭಾರೀ ಕಂಪನಗಳು ಸಂಭವಿಸಿವೆ . ಒಂದು ರಿಕ್ಟರ್ ಮಾಪಕದಲ್ಲಿ 4.6 ಮತ್ತು ಇನ್ನೊಂದು 6.2 ದಾಖಲಾಗಿದೆ. ಭೂಮಿಯಲ್ಲಿ
5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ. ನೇಪಾಳದಲ್ಲಿ ಮೊದಲ ಭೂಕಂಪ ಮಧ್ಯಾಹ್ನ 2:25 ಕ್ಕೆ ಸಂಭವಿಸಿತು, ಎರಡನೆಯದು ಮಧ್ಯಾಹ್ನ 2:51ಕ್ಕೆ ನಡೆಯಿತು.
“ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2 ದಾಖಲಾಗಿದೆ. ಇದು 5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಹೇಳಿಕೆಯಲ್ಲಿ ತಿಳಿಸಿದೆ.
ಹಾಗೆ ದೆಹಲಿ ಮತ್ತು ಇತರ ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ. ಉತ್ತರ ಪ್ರದೇಶದ ಲಕ್ನೋ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪಗಳ ನಂತರ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನಗಳು ಸಂಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು