7:42 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನೆರೆ ಹಾವಳಿಗೆ ಕೇಂದ್ರದ ಅನುದಾನ ಕೇಳಲು ರಾಜ್ಯ ಬಿಜೆಪಿಗೆ ದಮ್ಮು ಇಲ್ಲ; ಪ್ರತಿಪಕ್ಷದ ಉಪ ನಾಯಕ ಖಾದರ್ ಕಿಡಿ

06/08/2022, 20:40

ಮಂಗಳೂರು(reporterkarnataka.com): ರಾಜ್ಯದಲ್ಲಿ ಜನರು ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದ್ದಾರೆ. ಆದರೆ ರಾಜ್ಯ ಸರಕಾರದ ಬಳಿ ಈಗ ಅತಿವೃಷ್ಟಿಗೆ ಯಾವುದೇ ಯೋಜನೆಗಳಿಲ್ಲ. ಹಾಗೇ ಕೇಂದ್ರದಿಂದ ಅನುದಾನ ಕೇಳುವ ಧೈರ್ಯವೂ ಇವರಿಗಿಲ್ಲ.

ಇದರಿಂದ ಸಂತ್ರಸ್ತರು ಅನಾಥರಾಗಿದ್ದಾರೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಆದರೆ 25 ಮಂದಿ ಸಂಸದರು ಮತ್ತು ರಾಜ್ಯ ಸರ್ಕಾರ ಗೃಹ ಸಚಿವರ ಬಳಿ ಎನ್‌ಡಿಆರ್‌ಫ್ ಅನುದಾನ ಯಾಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವರು ಮೊನ್ನೆ ಬೆಂಗಳೂರಿಗೆ ಬಂದಾಗ ಅವರ ಬಳಿ ಪಕ್ಷದ ಬಗ್ಗೆ ಮಾತನಾಡುತ್ತಾರೆ ಹೊರತು ಎನ್‌ಡಿಆರ್‌ಎಫ್ ಅನುದಾನ ಕೇಳಲು ಇವರಿಗೆ ಬಾಯಿ ಬರುವುದಿಲ್ಲ. ಇವರು ಜನರನ್ನು ಉಳಿಸುವ ಬದಲು ಪಕ್ಷ ಉಳಿಸುವ ಬಗ್ಗೆ ಗೃಹ ಸಚಿವರಲ್ಲಿ ಮಾತನಾಡುತ್ತಾರೆ ಎಂದು ಖಾದರ್ ಕಿಡಿ ಕಾರಿದರು.

ಬಿಜೆಪಿಯವರಿಗೆ ಕೇಂದ್ರದ ಬಳಿ ಅನುದಾನ ಕೇಳಲು ಮುಜುಗರ ಮತ್ತು ಭಯ ಆಗೋದಾದರೆ ಸರ್ವಪಕ್ಷದ ನಿಯೋಗ ಕರೆದುಕೊಂಡು ಹೋಗಲಿ. ರಾಜ್ಯದ ಪರವಾಗಿ ನಾವು ಮಾತನಾಡುತ್ತೇವೆ. ಸುಳ್ಯ ಸಂಪಾಜೆಗೆ ವಿಶೇಷ ತಂಡ ಕಳುಹಿಸಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಶಾಂತಿ- ಸಾಮರಸ್ಯಕ್ಕೆ ಜಿಲ್ಲಾಡಳಿತದ ಯಾವುದೇ ತೀರ್ಮಾನಕ್ಕೆ ನಾವು ಬದ್ಧ. ಆದರೆ ಈಗ 3 ಪರ್ಸೆಂಟ್ ಸಮಾಜಘಾತುಕರಿಗೆ ಹೆದರಿ 97 ಶೇಕಡಾ ಜನರಿಗೆ ಕಷ್ಟ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು