5:05 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು