5:16 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು